ಬೆಂಗಳೂರು : ಬೆಂಗಳೂರಿಗೆ ಪದೇ, ಪದೇ ಬಾಂಬ್ ಶಾಕ್ ಕೊಡುತ್ತಿದ್ದು, ಬೆದರಿಕೆ ಕರೆ, ಇ-ಮೇಲ್ ಮೆಸೇಜ್ನಿಂದ ಪೊಲೀಸರು ಹೈರಾಣಾ ಗಿದ್ದಾರೆ. ಇದೀಗ ಮೂರು ಮ್ಯೂಸಿಯಂಗಳಿಗೆ ಬಾಂಬ್ ಬೆದರಿಕೆ ಮೆಸೇಜ್ ಬಂದಿದೆ.
ವಿಶ್ವೇಶ್ವರಯ್ಯ ಮ್ಯೂಸಿಯಂ, ನೆಹರು ತಾರಾಲಯಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿತ್ತು. ಮ್ಯೂಸಿಯಂನಲ್ಲಿ ಸ್ಪೋಟಕ ಬಚ್ಚಿಟ್ಟಿದ್ದೇವೆ, ಎಲ್ಲಾ ಸ್ಫೋಟ ಆಗುತ್ತೆ ಎಂದು ಟೆರರೈಸರ್ಸ್ ಹೆಸರು ಉಲ್ಲೇಖಿಸಿ ಇ-ಮೇಲ್ ಸಂದೇಶ ಬಂದಿದೆ. ಮೇಲ್ ನೋಡಿದ ಬಳಿಕ ಕಬ್ಬನ್ ಪಾರ್ಕ್ ಪೊಲೀಸರಿಗೆ ಮಾಹಿತಿ ತಿಳಿಸಲಾಗಿದೆ. ಪೊಲೀಸರ ಪರಿಶೀಲನೆ ನಂತರ ಹುಸಿ ಮೆಸೇಜ್ ಅನ್ನೋದು ಪತ್ತೆಯಾಗಿದೆ. ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.
ಮತ್ತೊಂದೆಡೆ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ. ಮುಂಬೈನ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರ ಕಚೇರಿಗೆ ಕರೆ ಮಾಡಿ, ಬೆಂಗಳೂರಿನ ಕಚೇರಿಯಲ್ಲಿ ಬಾಂಬ್ ಇಡಲಾಗಿದೆ ಎಂದು ಹೇಳಿದ್ದಾರೆ.
ಮುಂಬೈನ ಎನ್ಎಸ್ಇ ಕಚೇರಿ ಅಧಿಕಾರಿಗಳು ಮಧ್ಯರಾತ್ರಿ ಒಂದು ಗಂಟೆಗೆ ಸುಮಾರಿಗೆ ವಿಧಾನಸೌಧ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದರು. ತಕ್ಷಣ ಪೊಲೀಸರು ಬಾಂಬ್ ನಿಷ್ಕ್ರಿಯ ದಳದೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪರಿಶೀಲನೆ ವೇಳೆ ಯಾವುದೇ ಸ್ಪೋಟಕವಸ್ತು ಪತ್ತೆಯಾಗಿಲ್ಲ. ಸದ್ಯ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ನಟ ರಿಷಬ್ ಶೆಟ್ಟಿಗೆ ದೈವದ ಅಭಯ..